ಶಾಂತಿಗಾಗಿ ಮಾನವ ಕುಲ ಕೆಲಸ ಮಾಡಲಿ: ಸಿಎಂ ಸಿದ್ದರಾಮಯ್ಯ

Sep 6, 2025 - 07:13
ಶಾಂತಿಗಾಗಿ ಮಾನವ ಕುಲ ಕೆಲಸ ಮಾಡಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು, ಸಂವಿಧಾನದ ಪಾಲನೆಯೇ ಎಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಜಂಟಿ ಮಿಲಾದ್ ಸಮಿತಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಸಮಾವೇಶ’ದಲ್ಲಿ ಮಾತನಾಡಿದರು.

ಪ್ರವಾದಿ ಅವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣ ಅವರ ನೇತೃತ್ವದ ಶರಣರ ಚಳವಳಿ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲದ ಶಾಂತಿಗಾಗಿ, ಸಹಬಾಳ್ವೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಅವರ ಬೋಧನೆಯಾಗಿದೆ ಎಂದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0