ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಸಂಘಪರಿವಾರ ಕಾರ್ಯಕರ್ತರ ಪ್ರತಿಭಟನೆ, ಲಾಠಿಚಾರ್ಜ್
ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ವೇಳೆ ಘರ್ಷಣೆ ಉಂಟಾಗಿರುವ ಆರೋಪದ ಮೇಲೆ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಸೀದಿ ಮುಂದೆ ಡಿಜೆ ಹಾಕಿ ಸಂಘಪರಿವಾರದ ಕಾರ್ಯಕರ್ತರು ನೃತ್ಯ ಮಾಡಲು ಆರಂಭಿಸಿದರು. ಮಸೀದಿ ಜಾಗ ಬಿಟ್ಟು ಹೋಗುವಂತೆ ಪೊಲೀಸರು ಈ ಸಂದರ್ಭದಲ್ಲಿ ಸೂಚಿಸಿದರು. ಆದರೆ ಸಂಘಪರಿವಾರದ ಕಾರ್ಯಕರ್ತರು ಸ್ಥಳದಿಂದ ಕದಲಿಲ್ಲ. ಘೋಷಣೆ ಕೂಗುತ್ತಾ ಡ್ಯಾನ್ಸ್ ಮಾಡುತ್ತಿದ್ದಂತೆ ಪೊಲೀಸರು ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದಾರೆ.
What's Your Reaction?
Like
1
Dislike
1
Love
0
Funny
0
Angry
0
Sad
0
Wow
1



