ಆಂಧ್ರಪ್ರದೇಶ | ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ: 6 ಸಾವು
ರಾಯವರಂ: ಆಂಧ್ರಪ್ರದೇಶದ ಡಾ. ಬಿ. ಆರ್. ಅಂಬೇಡ್ಕರ್ ಕೋನಸೀಮೆ ಜಿಲ್ಲೆಯಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿನ ಕಳಪೆ ನಿರ್ವಹಣೆಯಿಂದ, ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕವು ಪರವಾನಗಿ ಹೊಂದಿದೆ. ಈಗ 6 ಮೃತದೇಹ ಹೊರತೆಗೆಯಲಾಗಿದ್ದು, ಅದರ ಗುರುತು ಪತ್ತೆ ಮಾಡುತ್ತಿದ್ದೇವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



