ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ : ಬಿವೈ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ!

Dec 9, 2025 - 13:19
ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ : ಬಿವೈ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ!

ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪರ ಬಿಜೆಪಿ ನಾಯಕರು ಹೋರಾಟಕ್ಕೆ ಇಳಿದಿದ್ದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಇದೀಗ ಹೊರಟಿದ್ದಾರೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆಯಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ.

ಇವಳೆ ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಿಟಿ ರವಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪರಿಷತ್ ಸದಸ್ಯ ಸಿಟಿ ರವಿ ಸಿರಿದಂತೆ ಎಲ್ಲಾ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ್ಯಾಲಿ ತೆರಳಿತು ಸುವರ್ಣ ಸೌಧ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0