ತಹಶೀಲ್ದಾರ್, ಪೊಲೀಸರ ಎದುರೇ ಕಾಂಗ್ರೆಸ್ ಮುಖಂಡ ಆತ್ಮಹತ್ಯೆಗೆ ಯತ್ನ!

Mar 15, 2025 - 10:42
ತಹಶೀಲ್ದಾರ್, ಪೊಲೀಸರ ಎದುರೇ ಕಾಂಗ್ರೆಸ್ ಮುಖಂಡ ಆತ್ಮಹತ್ಯೆಗೆ ಯತ್ನ!

ಚಿಕ್ಕಮಗಳೂರು: ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ದಾರುಣ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?

ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ. ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.

What's Your Reaction?

Like Like 0
Dislike Dislike 1
Love Love 1
Funny Funny 1
Angry Angry 0
Sad Sad 0
Wow Wow 0