ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಸಾವಿನ ಸಂಖ್ಯೆ 11 ಕ್ಕೇರಿಕೆ, 47 ಮಂದಿ ಗಂಭೀರ

Jun 4, 2025 - 22:13
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಸಾವಿನ ಸಂಖ್ಯೆ 11 ಕ್ಕೇರಿಕೆ, 47 ಮಂದಿ ಗಂಭೀರ

ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 11 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 11 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಈ ಪೈಕಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ ರವಾನಿಸಲಾಗಿದ್ದ ಆರು ಮಂದಿ ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0