ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

Aug 26, 2025 - 09:41
ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್ ಜೆ ಆರ್ಕೇಡ್ ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್‌, ನಗರ ಠಾಣೆ ಎಸ್‌ಐ ಮುರಳೀಧರ್ ನಾಯ್ಕ ಗ್ರಾಮಾಂತರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0